25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

ಬೆಳ್ತಂಗಡಿ: ಮೇ 9ರಂದು ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರರ ಅಂತಿಮ ವಿಧಿ ವಿಧಾನ ಕಾರ್ಯಕ್ರಮವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟ ಕರ್ನಾಟಕ ಸರಕಾರಕ್ಕೆ, ಮತ್ತು ಸಹಕರಿಸಿದ ಮಹನೀಯರಿಗೆ ವಸಂತ ಬಂಗೇರರ ಪತ್ನಿ ಸುಜೀತಾ ಬಂಗೇರ ಮತ್ತು ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ, ದೂರವಾಣಿ ಕರೆ ಮಾಡಿ ಸ್ಥೆರ್ಯ ತುಂಬಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ರವರಿಗೆ, ಅಂತಿಮ ದರ್ಶನಗೈದ ಸಂಸದರು, ಶಾಸಕರು, ವಿಧಾನ ಪರಿಷತ್‌ ಶಾಸಕರುಗಳು, ಮಾಜಿ ಸಚಿವರುಗಳು, ಮಾಜಿ ಶಾಸಕರುಗಳು, ವಿಧಾನ ಪರಿಷತ್ ಮಾಜಿ ಶಾಸಕರುಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಸರ್ವ ಧರ್ಮದ ಧರ್ಮಗುರುಗಳಿಗೆ, ಪತ್ರಿಕೆ ಹಾಗೂ ದೃಶ್ಯ ಮಾಧ್ಯಮದ ಪ್ರತಿನಿಧಿಗಳಿಗೆ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ, ವಿವಿಧ ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ, ವಿವಿಧ ಇಲಾಖಾಧಿಕಾರಿಗಳಿಗೆ, ವಿವಿಧ ಇಲಾಖೆಯ ನಿವೃತ ಅಧಿಕಾರಿಗಳಿಗೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು

ಮದ್ದಡ್ಕ ಪೇಟೆಯ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಗೌರವ ಸೂಚಿಸಿದ ವರ್ತಕ ಬಂಧುಗಳಿಗೆ, ಅಂತಿಮ ದರ್ಶನದ ಸಕಲ ವ್ಯವಸ್ಥೆಗಳ ಉಸ್ತುವಾರಿ ವಹಿಸಿ ನಿರ್ವಹಿಸಿದ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಎಲ್ಲಾ ಪದಾಧಿಕಾರಿಗಳಿಗೆ, ವಿಶೇಷವಾಗಿ ಅಚ್ಚುಕಟ್ಟಾಗಿ ಬಂದೋಬಸ್ತ್ ಕಾರ್ಯ ನಿರ್ವಹಿಸಿದ ಬೆಳ್ತಂಗಡಿಯ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಗಳಿಗೆ, ಅಂತಿಮ ವಿಧಿ ವಿಧಾನ ನಿರ್ವಹಿಸಲು ಸಹಕರಿಸಿದ ಕುಟುಂಬ ವರ್ಗದವರಿಗೆ, ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಎಲ್ಲಾ ಅಭಿಮಾನಿಗಳಿಗೆ ಪತ್ನಿ ಸುಜಿತಾ ವಿ. ಬಂಗೇರ, ಧರ್ಮ ವಿಜೇತ್ ಮತ್ತು ಪ್ರೀತಿತಾ ಬಂಗೇರ, ಸಂಜೀವ್ ಕನೇಕಲ್‌ ಮತ್ತು ಬಿನುತಾ ಬಂಗೇರ ಮತ್ತು ಮೊಮ್ಮಕ್ಕಳು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya
error: Content is protected !!