23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya
error: Content is protected !!