July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya
error: Content is protected !!