23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ , 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ತಾಲೂಕು ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪುತ್ಥಳಿ/ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸಿ ತನ್ನ ವೈಯಕ್ತಿಕ ವರ್ಚಸ್ಸಿನ ಮೂಲಕ ಮೂರು ಪಕ್ಷಗಳಲ್ಲೂ ಶಾಸಕರಾದ ರಾಜ್ಯದ ಏಕೈಕ ರಾಜಕಾರಣಿ ಬಂಗೇರರು. ಜನರ ಸೇವೆಯನ್ನು ತನ್ನ ಉಸಿರಾಗಿಸಿ ತನ್ನ ಇಳಿ ವಯಸ್ಸಿನಲ್ಲೂ ಬಡವರ ಸೇವೆಗೈದ ಅಪರೂಪದ ಜನಸೇವಕ. ತನ್ಮೂಲಕ ರಾಜ್ಯಸರ್ಕಾರ ಬಂಗೇರ ಅವರ ಸೇವೆಯನ್ನು ಪರಿಗಣಿಸಿ, ಪಕ್ಷಾತೀತವಾಗಿ ಜನರ ಒಕ್ಕೊರಲ ಬೇಡಿಕೆಯಾದ ಬಸ್ ನಿಲ್ದಾಣಕ್ಕೆ ಹೆಸರು ಮತ್ತು ಪುತ್ಥಳಿ ಸ್ಥಾಪನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

Related posts

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!