25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya
error: Content is protected !!