29 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya
error: Content is protected !!