25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
error: Content is protected !!