July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಭಾಗವಹಿಸಿದರು. ಭಜನಾ ಮಂಡಳಿಯ ವತಿಯಿಂದ ಇವರನ್ನು ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ರವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಕಾರ್ಯಕ್ರಮದ ನಂತರ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಯವರು ಭಜನಾ ಮಂಡಳಿಗಳಲ್ಲಿ ಹಿಂದೆ ನಡೆಯುತ್ತಿದ್ದ ಭಜನೆ ಈಗ ಬದಲಾವಣೆಯ ದಾರಿಯಲ್ಲಿ ಆಗುತ್ತಿರುವ ಭಜನೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ನಡೆಯಬಹುದಾದ ಭಜನೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಾ ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಕೆಲವು ಸಲಹೆಗಳನ್ನು ಸ್ವೀಕರಿಸಿದರು.


ಭಜನಾ ಮಂಡಳಿಯ ಜೊತೆ ಕಾರ್ಯದರ್ಶಿಯಾದ ವಿನೋದ್ ಕುಮಾರ್ ರವರು ಸ್ವಾಗತಿಸಿ, ವಂದಿಸಿದರು.

Related posts

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya
error: Content is protected !!