23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಭಾಗವಹಿಸಿದರು. ಭಜನಾ ಮಂಡಳಿಯ ವತಿಯಿಂದ ಇವರನ್ನು ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ರವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಕಾರ್ಯಕ್ರಮದ ನಂತರ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಯವರು ಭಜನಾ ಮಂಡಳಿಗಳಲ್ಲಿ ಹಿಂದೆ ನಡೆಯುತ್ತಿದ್ದ ಭಜನೆ ಈಗ ಬದಲಾವಣೆಯ ದಾರಿಯಲ್ಲಿ ಆಗುತ್ತಿರುವ ಭಜನೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ನಡೆಯಬಹುದಾದ ಭಜನೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಾ ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಕೆಲವು ಸಲಹೆಗಳನ್ನು ಸ್ವೀಕರಿಸಿದರು.


ಭಜನಾ ಮಂಡಳಿಯ ಜೊತೆ ಕಾರ್ಯದರ್ಶಿಯಾದ ವಿನೋದ್ ಕುಮಾರ್ ರವರು ಸ್ವಾಗತಿಸಿ, ವಂದಿಸಿದರು.

Related posts

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya
error: Content is protected !!