April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ದೃಢ ಕಲಶ, ನಾಗ ದೇವರ ಸನ್ನಿಧಿಯಲ್ಲಿ ತನುತರ್ಪಣೆ ಮೇ 11ರಂದು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಮೇ 10ರಂದು ಸಂಜೆ ವಾಸ್ತು ರಕ್ಷೋಘ್ನ ಹೋಮ, ಮೇ 11ರಂದು ಬೆಳಿಗ್ಗೆ ಗಣಹೋಮ, ಬಿಂಬ ಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ನಾಗ ದೇವರಲ್ಲಿ ತನುತರ್ಪಣೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಆಡಳಿತಾಧಿಕಾರಿ ಮೋಹನ ಬಂಗೇರ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲೋಕೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಬಿ. ಕೆ.ರಾಜಶೇಖರ ರಾವ್, ಪ್ರಧಾನ ಕಾರ್ಯದರ್ಶಿ ಡಿ. ದಿನೇಶ್ ಗೌಡ, ಕೋಶಾಧಿಕಾರಿ ಕೆ.ವಾಸುದೇವ ರಾವ್ ಕಕ್ಕೆನೇಜಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಸೇನೆರೆಬೆಟ್ಟು, ಕಾರ್ಯದರ್ಶಿ ಜ್ಯೋತಿಲಕ್ಷ್ಮೀ ಕಿಲ್ಲೂರು, ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಅರ್ಚಕರು, ವಿಲಯದವರು ಊರವರು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!