22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ದೃಢ ಕಲಶ, ನಾಗ ದೇವರ ಸನ್ನಿಧಿಯಲ್ಲಿ ತನುತರ್ಪಣೆ ಮೇ 11ರಂದು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಮೇ 10ರಂದು ಸಂಜೆ ವಾಸ್ತು ರಕ್ಷೋಘ್ನ ಹೋಮ, ಮೇ 11ರಂದು ಬೆಳಿಗ್ಗೆ ಗಣಹೋಮ, ಬಿಂಬ ಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ನಾಗ ದೇವರಲ್ಲಿ ತನುತರ್ಪಣೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಆಡಳಿತಾಧಿಕಾರಿ ಮೋಹನ ಬಂಗೇರ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲೋಕೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಬಿ. ಕೆ.ರಾಜಶೇಖರ ರಾವ್, ಪ್ರಧಾನ ಕಾರ್ಯದರ್ಶಿ ಡಿ. ದಿನೇಶ್ ಗೌಡ, ಕೋಶಾಧಿಕಾರಿ ಕೆ.ವಾಸುದೇವ ರಾವ್ ಕಕ್ಕೆನೇಜಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಸೇನೆರೆಬೆಟ್ಟು, ಕಾರ್ಯದರ್ಶಿ ಜ್ಯೋತಿಲಕ್ಷ್ಮೀ ಕಿಲ್ಲೂರು, ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಅರ್ಚಕರು, ವಿಲಯದವರು ಊರವರು ಉಪಸ್ಥಿತರಿದ್ದರು.

Related posts

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya
error: Content is protected !!