23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ , 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ತಾಲೂಕು ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪುತ್ಥಳಿ/ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸಿ ತನ್ನ ವೈಯಕ್ತಿಕ ವರ್ಚಸ್ಸಿನ ಮೂಲಕ ಮೂರು ಪಕ್ಷಗಳಲ್ಲೂ ಶಾಸಕರಾದ ರಾಜ್ಯದ ಏಕೈಕ ರಾಜಕಾರಣಿ ಬಂಗೇರರು. ಜನರ ಸೇವೆಯನ್ನು ತನ್ನ ಉಸಿರಾಗಿಸಿ ತನ್ನ ಇಳಿ ವಯಸ್ಸಿನಲ್ಲೂ ಬಡವರ ಸೇವೆಗೈದ ಅಪರೂಪದ ಜನಸೇವಕ. ತನ್ಮೂಲಕ ರಾಜ್ಯಸರ್ಕಾರ ಬಂಗೇರ ಅವರ ಸೇವೆಯನ್ನು ಪರಿಗಣಿಸಿ, ಪಕ್ಷಾತೀತವಾಗಿ ಜನರ ಒಕ್ಕೊರಲ ಬೇಡಿಕೆಯಾದ ಬಸ್ ನಿಲ್ದಾಣಕ್ಕೆ ಹೆಸರು ಮತ್ತು ಪುತ್ಥಳಿ ಸ್ಥಾಪನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya
error: Content is protected !!