September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಅನಿತಾ ಪೂಜಾರಿ ದೀಪ ಪ್ರಜ್ವಲಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಕ ಪ್ರವೀಣ್, ಮುಳಿಯ ಗ್ರಾಹಕ ಹರ್ಷ, ಮುಳಿಯ ಜ್ಯುವೆಲ್ಲರ್‍ಸ್ ಉಪವ್ಯವಸ್ಥಾಪಕ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

ಯುವ ಸಾಹಿತಿ ಚಂದ್ರಹಾಸ ಕಾರ್ಯಕ್ರಮ ನಿರೂಪಿಸಿದರು. ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದರು.

Related posts

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya
error: Content is protected !!