23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!