25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya
error: Content is protected !!