23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಭಾಗವಹಿಸಿದರು. ಭಜನಾ ಮಂಡಳಿಯ ವತಿಯಿಂದ ಇವರನ್ನು ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ರವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಕಾರ್ಯಕ್ರಮದ ನಂತರ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಯವರು ಭಜನಾ ಮಂಡಳಿಗಳಲ್ಲಿ ಹಿಂದೆ ನಡೆಯುತ್ತಿದ್ದ ಭಜನೆ ಈಗ ಬದಲಾವಣೆಯ ದಾರಿಯಲ್ಲಿ ಆಗುತ್ತಿರುವ ಭಜನೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ನಡೆಯಬಹುದಾದ ಭಜನೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಾ ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಕೆಲವು ಸಲಹೆಗಳನ್ನು ಸ್ವೀಕರಿಸಿದರು.


ಭಜನಾ ಮಂಡಳಿಯ ಜೊತೆ ಕಾರ್ಯದರ್ಶಿಯಾದ ವಿನೋದ್ ಕುಮಾರ್ ರವರು ಸ್ವಾಗತಿಸಿ, ವಂದಿಸಿದರು.

Related posts

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya
error: Content is protected !!