July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಭಾಗವಹಿಸಿದರು. ಭಜನಾ ಮಂಡಳಿಯ ವತಿಯಿಂದ ಇವರನ್ನು ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ರವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಕಾರ್ಯಕ್ರಮದ ನಂತರ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಯವರು ಭಜನಾ ಮಂಡಳಿಗಳಲ್ಲಿ ಹಿಂದೆ ನಡೆಯುತ್ತಿದ್ದ ಭಜನೆ ಈಗ ಬದಲಾವಣೆಯ ದಾರಿಯಲ್ಲಿ ಆಗುತ್ತಿರುವ ಭಜನೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ನಡೆಯಬಹುದಾದ ಭಜನೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಾ ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಕೆಲವು ಸಲಹೆಗಳನ್ನು ಸ್ವೀಕರಿಸಿದರು.


ಭಜನಾ ಮಂಡಳಿಯ ಜೊತೆ ಕಾರ್ಯದರ್ಶಿಯಾದ ವಿನೋದ್ ಕುಮಾರ್ ರವರು ಸ್ವಾಗತಿಸಿ, ವಂದಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya
error: Content is protected !!