23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಅನಿತಾ ಪೂಜಾರಿ ದೀಪ ಪ್ರಜ್ವಲಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಕ ಪ್ರವೀಣ್, ಮುಳಿಯ ಗ್ರಾಹಕ ಹರ್ಷ, ಮುಳಿಯ ಜ್ಯುವೆಲ್ಲರ್‍ಸ್ ಉಪವ್ಯವಸ್ಥಾಪಕ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

ಚಿತ್ರಕಲೆ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿ 1 ರಿಂದ 6 ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ನಿಧಿ ಕೈರಂಗಲ, ದ್ವಿತೀಯ ಬಹುಮಾನವನ್ನು ತ್ರಿಷಾ ಗೋಳಿಯಂಗಡಿ, ತೃತೀಯ ಬಹುಮಾನವನ್ನು ಮಹೋಜಸ್ ಪಿ ಪಡೆದುಕೊಂಡರು. 6ರಿಂದ 12 ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ನಿನಾದ್ ಕೈರಂಗಲ, ದ್ವಿತೀಯ ಬಹುಮಾನವನ್ನು ಅನನ್ಯ ಕಕ್ಕಿಂಜೆ, ತೃತೀಯ ಬಹುಮಾನವನ್ನು ಭುವಿ ಸಜಿಪ ಪಡೆದುಕೊಂಡರು.

ಯುವ ಸಾಹಿತಿ ಚಂದ್ರಹಾಸ ಕಾರ್ಯಕ್ರಮ ನಿರೂಪಿಸಿದರು. ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

Related posts

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya
error: Content is protected !!