July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ , 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ತಾಲೂಕು ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪುತ್ಥಳಿ/ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸಿ ತನ್ನ ವೈಯಕ್ತಿಕ ವರ್ಚಸ್ಸಿನ ಮೂಲಕ ಮೂರು ಪಕ್ಷಗಳಲ್ಲೂ ಶಾಸಕರಾದ ರಾಜ್ಯದ ಏಕೈಕ ರಾಜಕಾರಣಿ ಬಂಗೇರರು. ಜನರ ಸೇವೆಯನ್ನು ತನ್ನ ಉಸಿರಾಗಿಸಿ ತನ್ನ ಇಳಿ ವಯಸ್ಸಿನಲ್ಲೂ ಬಡವರ ಸೇವೆಗೈದ ಅಪರೂಪದ ಜನಸೇವಕ. ತನ್ಮೂಲಕ ರಾಜ್ಯಸರ್ಕಾರ ಬಂಗೇರ ಅವರ ಸೇವೆಯನ್ನು ಪರಿಗಣಿಸಿ, ಪಕ್ಷಾತೀತವಾಗಿ ಜನರ ಒಕ್ಕೊರಲ ಬೇಡಿಕೆಯಾದ ಬಸ್ ನಿಲ್ದಾಣಕ್ಕೆ ಹೆಸರು ಮತ್ತು ಪುತ್ಥಳಿ ಸ್ಥಾಪನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

Related posts

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya
error: Content is protected !!