25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ , 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ತಾಲೂಕು ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪುತ್ಥಳಿ/ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸಿ ತನ್ನ ವೈಯಕ್ತಿಕ ವರ್ಚಸ್ಸಿನ ಮೂಲಕ ಮೂರು ಪಕ್ಷಗಳಲ್ಲೂ ಶಾಸಕರಾದ ರಾಜ್ಯದ ಏಕೈಕ ರಾಜಕಾರಣಿ ಬಂಗೇರರು. ಜನರ ಸೇವೆಯನ್ನು ತನ್ನ ಉಸಿರಾಗಿಸಿ ತನ್ನ ಇಳಿ ವಯಸ್ಸಿನಲ್ಲೂ ಬಡವರ ಸೇವೆಗೈದ ಅಪರೂಪದ ಜನಸೇವಕ. ತನ್ಮೂಲಕ ರಾಜ್ಯಸರ್ಕಾರ ಬಂಗೇರ ಅವರ ಸೇವೆಯನ್ನು ಪರಿಗಣಿಸಿ, ಪಕ್ಷಾತೀತವಾಗಿ ಜನರ ಒಕ್ಕೊರಲ ಬೇಡಿಕೆಯಾದ ಬಸ್ ನಿಲ್ದಾಣಕ್ಕೆ ಹೆಸರು ಮತ್ತು ಪುತ್ಥಳಿ ಸ್ಥಾಪನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

Related posts

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!