July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya
error: Content is protected !!