July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya
error: Content is protected !!