24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!