22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya
error: Content is protected !!