ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ಮೊದಲ ಸ್ಥಾನವನ್ನು ಪಡೆದಿದ್ದು , ಪೂಜ್ಯ ಖಾವಂದರಾದ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಡಿ. ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ ,ಶುಭ ಹಾರೈಸಿದರು.

ನಮ್ಮ ಸಂಸ್ಥೆ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರುವುದು ನಮ್ಮಗೆಲ್ಲ ಹೆಮ್ಮೆಯ ವಿಷಯ ವೆಂದು ಸಂತಸ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಎಸ್ ಸತೀಶ್ಚಂದ್ರ , ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಚಿನ್ಮಯ್ ಜಿ ಕೆಯ ಪೋಷಕರು ಉಪಸ್ಥಿತರಿದ್ದರು.

Leave a Comment

error: Content is protected !!