25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷ ಇದನ್ನು ಆಚರಿಸಿಕೊಂಡು ಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡಂತೆ ದಾದಿಯರ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ ಸರಿಯಾದ ರೀತಿಯಲ್ಲಿ ರೋಗಿಗಳಿಗೆ ಶುಶ್ರೂಷೆ ನೀಡಲು ದಾದಿಯರ ಕರ್ತವ್ಯ ಮಹತ್ವವಾದದ್ದು, ಅವರು ಆಸ್ಪತ್ರೆಯ ಹೃದಯವಿದ್ದಂತೆ. ನಮ್ಮ ಆಸ್ಪತ್ರೆಯು ಈ ಹಂತ ತಲುಪಲು ಇಲ್ಲಿ ಸೇವೆಸಲ್ಲಿಸುತ್ತಿರುವ ದಾದಿಯರ ಕರ್ತವ್ಯ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 35 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಹಿರಿಯ ದಾದಿ ಶ್ರೀಮತಿ ಫಿಲೋಮಿನಾರವರನ್ನು ಅವರು ನೀಡಿದ ಸೇವೆಯನ್ನು ಸ್ಮರಿಸಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳು ಶಾಲುಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.


ಸಿಸ್ಟೆರ್ ಅಶ್ವಿನಿ.ಕೆ ಯವರು ಈ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. ಸಿಸ್ಟರ್ ಅನಿಲ ಬೆನ್ನಿ ಯವರು ಆಸ್ಪತ್ರೆಯ ಎಲ್ಲ ದಾದಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಸ್ಪತ್ರೆಯ ಪಿ.ಅರ್. ಓ ಎಸ್. ಜಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ| ಭಾರತಿ ಜಿ. ಕೆ ಯವರು ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಆಸ್ಪತ್ರೆಯ ದಾದಿಯರು ಮತ್ತು ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya
error: Content is protected !!