ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷ ಇದನ್ನು ಆಚರಿಸಿಕೊಂಡು ಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡಂತೆ ದಾದಿಯರ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ ಸರಿಯಾದ ರೀತಿಯಲ್ಲಿ ರೋಗಿಗಳಿಗೆ ಶುಶ್ರೂಷೆ ನೀಡಲು ದಾದಿಯರ ಕರ್ತವ್ಯ ಮಹತ್ವವಾದದ್ದು, ಅವರು ಆಸ್ಪತ್ರೆಯ ಹೃದಯವಿದ್ದಂತೆ. ನಮ್ಮ ಆಸ್ಪತ್ರೆಯು ಈ ಹಂತ ತಲುಪಲು ಇಲ್ಲಿ ಸೇವೆಸಲ್ಲಿಸುತ್ತಿರುವ ದಾದಿಯರ ಕರ್ತವ್ಯ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 35 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಹಿರಿಯ ದಾದಿ ಶ್ರೀಮತಿ ಫಿಲೋಮಿನಾರವರನ್ನು ಅವರು ನೀಡಿದ ಸೇವೆಯನ್ನು ಸ್ಮರಿಸಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳು ಶಾಲುಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.


ಸಿಸ್ಟೆರ್ ಅಶ್ವಿನಿ.ಕೆ ಯವರು ಈ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. ಸಿಸ್ಟರ್ ಅನಿಲ ಬೆನ್ನಿ ಯವರು ಆಸ್ಪತ್ರೆಯ ಎಲ್ಲ ದಾದಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಸ್ಪತ್ರೆಯ ಪಿ.ಅರ್. ಓ ಎಸ್. ಜಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ| ಭಾರತಿ ಜಿ. ಕೆ ಯವರು ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಆಸ್ಪತ್ರೆಯ ದಾದಿಯರು ಮತ್ತು ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya
error: Content is protected !!