25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya
error: Content is protected !!