September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya
error: Content is protected !!