July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!