23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
error: Content is protected !!