July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
error: Content is protected !!