ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya
error: Content is protected !!