24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya
error: Content is protected !!