23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!