July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya
error: Content is protected !!