ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya
error: Content is protected !!