ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Leave a Comment

error: Content is protected !!