ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’;

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya
error: Content is protected !!