July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya
error: Content is protected !!