September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya
error: Content is protected !!