ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷಗಳಿಂದ ದೇಶ ಸೇವೆಗೈದು ಪಂಜಾಬ್, ಡೆಲ್ಲಿ, ಉತ್ತರಪ್ರದೇಶ, ಜಮ್ಮುಕಾಶ್ಮೀರ, ಅಸ್ಸಾಂ, ರಾಜಸ್ಥಾನ್, ಬೆಂಗಳೂರು, ಮಣಿಪುರ, ಪಂಜಾಬ್, ಮುಂತಾದೆಡೆ ಸೇವೆಗೈದು ಸೇವಾ ನಿವೃತ್ತಿ ಹೊಂದಿದ ಲಾಯಿಲದ ನಿವೃತ್ತ ಯೋಧ ಗಣೇಶ್ ಬಿ ಎಲ್ ಅವರಿಗೆ ಅಭಿನಂದನಾ ಕಾರ್ಯಕ್ರಮವು ಮೇ.12ರಂದು ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ನ್ಯಾಯವಾದಿ ಧನಂಜಯ ರಾವ್ ಆಭಿನಂದನಾ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಮಾಜಿ ಸೈನಿಕ ಅಧ್ಯಕ್ಷ ಸುನಿಲ್ ಶೆಣೈ, ಯೋಧರ ಮಾತೃ ಪಿತೃರಾದ ಕೃಷ್ಣಪ್ಪ ನಾಯ್ಕ್ ಮತ್ತು ಶ್ರೀಮತಿ ವಾರಿಜ, ಸಹೋದರ ನ್ಯಾಯವಾದಿ ಸಂತೋಷ್ ಕುಮಾರ್, ಲಾಯಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆ, ಮಾಜಿ ಉಪಾಧ್ಯಕ್ಷ ಗಣೇಶ್ ಲಾಯಿಲ, ಬೆಳ್ತಂಗಡಿ ಯಕ್ಷ ಪಟ್ಲ ಫೌಂಡೇಶನ್ ಅಧ್ಯಕ್ಷ ಸುರೇಶ್ ಶೆಟ್ಟಿ, ವಿಠಲ್ ಶೆಟ್ಟಿ ಲಾಯಿಲ, ಹಾಗೂ ಕರ್ನೋಡಿ ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ. ಹಳೆ ವಿದ್ಯಾರ್ಥಿ ಸಂಘ, ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ್ಯ ಸಭಾ, ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ, ಲಾಯಿಲ ಓಂ ಶಕ್ತಿ ಗೆಳೆಯರ ಬಳಗ, ಲಾಯಿಲ ಮಾರಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಲಾಯಿಲ ನೂರುಲ್ ಹುದಾ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ , ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸೇವಾ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!