July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya
error: Content is protected !!