July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ನೇಮೋತ್ಸವದ ಖರ್ಚು ವೆಚ್ಚ ಮಂಡನೆ ಹಾಗೂ ದೈವಗಳಿಗೆ ವಾರ್ಷಿಕ ಅಗೇಲು ಸೇವೆ ನೀಡುವ ಬಗ್ಗೆ ಚರ್ಚಿಸಲಾಯಿತು.


ಈ ವೇಳೆ ಮುಂದಿನ 3 ವರ್ಷಗಳ ಅವಧಿವರೆಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಪಾರ, ಕಾರ್ಯದರ್ಶಿಯಾಗಿ ಚಂದ್ರನಾಯ್ಕ, ಕೋಶಾಧಿಕಾರಿಯಾಗಿ ಬಾಲಕೃಷ್ಣ ನಾಯ್ಕ ಅತ್ತಾಜೆ, ಉಪಾಧ್ಯಕ್ಷರಾಗಿ ವಾಸುಪೂಜಾರಿ ಪಾರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಿಮ್ಮಯ್ಯ ನಾಯ್ಕ ಪಾರ, ದೇಜಪ್ಪಪೂಜಾರಿ, ಜಯರಾಮ ನಾಯ್ಕ, ಮನು, ಜಯಂತ ನಾಯ್ಕ ಇವರನ್ನು ಆಯ್ಕೆಮಾಡಲಾಯಿತು.

Related posts

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya
error: Content is protected !!