ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷ ಇದನ್ನು ಆಚರಿಸಿಕೊಂಡು ಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡಂತೆ ದಾದಿಯರ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ ಸರಿಯಾದ ರೀತಿಯಲ್ಲಿ ರೋಗಿಗಳಿಗೆ ಶುಶ್ರೂಷೆ ನೀಡಲು ದಾದಿಯರ ಕರ್ತವ್ಯ ಮಹತ್ವವಾದದ್ದು, ಅವರು ಆಸ್ಪತ್ರೆಯ ಹೃದಯವಿದ್ದಂತೆ. ನಮ್ಮ ಆಸ್ಪತ್ರೆಯು ಈ ಹಂತ ತಲುಪಲು ಇಲ್ಲಿ ಸೇವೆಸಲ್ಲಿಸುತ್ತಿರುವ ದಾದಿಯರ ಕರ್ತವ್ಯ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 35 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಹಿರಿಯ ದಾದಿ ಶ್ರೀಮತಿ ಫಿಲೋಮಿನಾರವರನ್ನು ಅವರು ನೀಡಿದ ಸೇವೆಯನ್ನು ಸ್ಮರಿಸಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳು ಶಾಲುಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.


ಸಿಸ್ಟೆರ್ ಅಶ್ವಿನಿ.ಕೆ ಯವರು ಈ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. ಸಿಸ್ಟರ್ ಅನಿಲ ಬೆನ್ನಿ ಯವರು ಆಸ್ಪತ್ರೆಯ ಎಲ್ಲ ದಾದಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಸ್ಪತ್ರೆಯ ಪಿ.ಅರ್. ಓ ಎಸ್. ಜಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ| ಭಾರತಿ ಜಿ. ಕೆ ಯವರು ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಆಸ್ಪತ್ರೆಯ ದಾದಿಯರು ಮತ್ತು ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!