23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷ ಇದನ್ನು ಆಚರಿಸಿಕೊಂಡು ಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡಂತೆ ದಾದಿಯರ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ ಸರಿಯಾದ ರೀತಿಯಲ್ಲಿ ರೋಗಿಗಳಿಗೆ ಶುಶ್ರೂಷೆ ನೀಡಲು ದಾದಿಯರ ಕರ್ತವ್ಯ ಮಹತ್ವವಾದದ್ದು, ಅವರು ಆಸ್ಪತ್ರೆಯ ಹೃದಯವಿದ್ದಂತೆ. ನಮ್ಮ ಆಸ್ಪತ್ರೆಯು ಈ ಹಂತ ತಲುಪಲು ಇಲ್ಲಿ ಸೇವೆಸಲ್ಲಿಸುತ್ತಿರುವ ದಾದಿಯರ ಕರ್ತವ್ಯ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 35 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಹಿರಿಯ ದಾದಿ ಶ್ರೀಮತಿ ಫಿಲೋಮಿನಾರವರನ್ನು ಅವರು ನೀಡಿದ ಸೇವೆಯನ್ನು ಸ್ಮರಿಸಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳು ಶಾಲುಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.


ಸಿಸ್ಟೆರ್ ಅಶ್ವಿನಿ.ಕೆ ಯವರು ಈ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. ಸಿಸ್ಟರ್ ಅನಿಲ ಬೆನ್ನಿ ಯವರು ಆಸ್ಪತ್ರೆಯ ಎಲ್ಲ ದಾದಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಸ್ಪತ್ರೆಯ ಪಿ.ಅರ್. ಓ ಎಸ್. ಜಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ| ಭಾರತಿ ಜಿ. ಕೆ ಯವರು ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಆಸ್ಪತ್ರೆಯ ದಾದಿಯರು ಮತ್ತು ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!