31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!