25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!