23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya
error: Content is protected !!