September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya
error: Content is protected !!